ಕರ್ನಾಟಕ ಸರಕಾರ ಬಡವರಿಗಾಗಿ ಕಡಿಮೆ ದರದಲ್ಲಿ ತೆರೆಯಲು ಉದ್ದೇಶಸಿರುವ ‘ಇಂದಿರಾ’ ಕ್ಯಾಂಟೀನ್ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ ಎ ನಾರಾಯಣ ಗೌಡರು ಹೇಳಿಕೆ ನೀಡಿದ್ದಾರೆ.
ಈ ಯೋಜನೆಗೆ ಇಂದಿರಾ ಕ್ಯಾಂಟೀನ್ ಎಂದು ಹೆಸರಿಡುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ವಿರೋಧಿಸುತ್ತದೆ. ಇಂದಿರಾ ಕ್ಯಾಂಟೀನ್ ಎಂದು ಹೆಸರಿಡುವ ಬದಲು ಮಹಾಶರಣೆ ಅಕ್ಕಮಹಾದೇವಿಯವರ ಹೆಸರು ಇಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಪರವಾಗಿ ಗೌಡರು ಒತ್ತಾಯಿಸಿದ್ದಾರೆ.