ಭಾಷೆಯ ನೆಪದಲ್ಲಿ ತನ್ನ ಪುಂಡಾಟಿಕೆಯನ್ನು ಮೆರೆಸುತ್ತಾ ಬಂದಿದ್ದ ಎಂ. ಇ. ಎಸ್ ಗೆ ತೀವ್ರ ಮುಖಭಂಗವಾಗಿದೆ. ತನ್ನ ರಾಜಕೀಯ ಬೇಳೆಕಾಳನ್ನು ಬೇಯಿಸಿಕೊಳ್ಳಲು ಬೆಳಗಾವಿಯಲ್ಲಿ ಆಗಾಗ ಸಮ್ಮೇಳನದ ನೆಪದಲ್ಲಿ ಜನರ ಮಧ್ಯ ಒಡಕು ಮೂಡಿಸಲು ಪ್ರಯತ್ನಿಸುತ್ತಿದ್ದ ಎಂ. ಇ. ಎಸ್ "ಮರಾಠಿ ಸೀಮಾ ಪರಿಷತ್" ನಡೆಸಲು ಹೋಗಿ ತೀವ್ರ ಮುಖಭಂಗ ಅನುಭವಿಸಿದೆ. ಅದರ ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ ಇದಕ್ಕು ಮುನ್ನ ಮಹಾರಾಷ್ಟ್ರ ಏಕೀಕರಣ ಸಮಿತಿ ಬೆಳಗಾವಿಯಲ್ಲಿ ನಡೆಸಲು ಉದ್ದೇಶಿಸಿರುವ "ಮರಾಠಿ ಸೀಮಾ ಪರಿಷತ್" ಸಮ್ಮೇಳನಕ್ಕೆ ಅನುಮತಿ ನೀಡಬಾರದೆಂದು ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಟಿ.ಏ. ನಾರಾಯಣ ಗೌಡರ ನೇತೃತ್ವದಲ್ಲಿ ೦೪-೦೨-೨೦೧೦ ರಂದು ಬೆಂಗಳೂರಿನ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿ ಸರಕಾರವನ್ನು ಆಗ್ರಹಿಸಿದರು. ಬೆಂಗಳೂರಿನ ಗಾಂಧಿ ಪ್ರತಿಮೆಯ ಬಳಿ ನಡೆದ ಪ್ರತಿಭಟನೆಯ ವರದಿಯನ್ನು ಇಲ್ಲಿ ನೋಡಿ. |