Karnataka Rashana Vedike
Kuvempu
Sangatane.jpg
ico_adhyaksharalEkhaniyinda3.jpg
kvrblog.jpg

ಎಂಇಎಸ್ ಪುಂಡಾಟಿಕೆ ವಿರುದ್ಧ ಕರವೇ ಪ್ರತಿಭಟನೆ

ಕ.ರ.ವೇ ಹೋರಾಟಗಳು
ಬೆಳಗಾವಿ ಕರ್ನಾಟಕದ್ದೇ ಎಂದು ಸಾರಲು ಕರವೇ ನಿರಂತರವಾಗಿ ಹೋರಾಟಗಳನ್ನು ನಡೆಸುತ್ತಿರುವುದು ಎಲ್ಲರಿಗೂ ತಿಳಿದಿದೆ. ಈ ಹೋರಾಟಗಳ ಪರಿಣಾಮವಾಗಿ ಕೇಂದ್ರ ಸರಕಾರ ಬೆಳಗಾವಿ ಕರ್ನಾಟಕದ್ದೇ ಎಂಬ ಪ್ರಮಾಣ ಪತ್ರವನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದೆ. ನಾಡವಿರೋಧಿ ಎಂಇಎಸ್ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಲು ಹಲವಾರು ಹುನ್ನಾರಗಳನ್ನು ನಡೆಸುತ್ತಿದೆ. ಎಂಇಎಸ್ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದ್ದು, ಕೇಂದ್ರ ಸರಕಾರದ ಪ್ರಮಾಣ ಪತ್ರದಿಂದ ಹತಾಶೆಗೆ ಒಳಗಾಗಿದೆ. ಈ ಹತಾಶೆಯಿಂದ ೧೨-ಜೂನ್ ೨೦೧೦ ರಂದು ಬೆಳಗಾವಿಯಲ್ಲಿ ಕನ್ನಡ ದ್ವಜಕ್ಕೆ ಅವಮಾನಿಸಿ ಮಹಾರಾಷ್ಟ್ರ ಧ್ವಜವನ್ನು ಹಾರಿಸಲು ಪ್ರಯತ್ನಿಸಿ ತನ್ನ ಪುಂಡಾಟಿಕೆಯನ್ನು ಮೆರೆದಿದೆ. ಎಂಇಎಸ್ ಪುಂಡಾಟಿಕೆಯನ್ನು ವಿರೋಧಿಸಿ ಬೆಳಗಾವಿಯ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕನ್ನಡ ಧ್ವಜವನ್ನು ಹಾರಿಸಿದ್ದಾರೆ..

ಎಂಇಎಸ್ ತನ್ನ ಪುಂಡಾಟಿಕೆಯ ಮೂಲಕ ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅವಮಾನಿಸುತ್ತಿದ್ದರು ರಾಜ್ಯ ಸರಕಾರ ಮೌನವಹಿಸಿದೆ. ಎಂಇಎಸ್ ನ ಪುಂಡಾಟಿಕೆ ಮತ್ತು ಸರಕಾರದ ಮೌನವನ್ನು ಖಂಡಿಸಿ ಕರವೇ ಕಾರ್ಯಕರ್ತರು ರಾಜ್ಯಾಧ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.
 
ಪತ್ರಿಕಾ ವರದಿಯನ್ನು ಇಲ್ಲಿ ನೋಡಿ-
 
 

ಕ.ರ.ವೇ ಹೋರಾಟಗಳು - ವಿಭಾಗದ ಇತರ ಅಂಕಣಗಳು

ನಿಮ್ಮ ಸ್ನೇಹಿತನಿಗೆ ಈ ಅಂಕಣ ಕಳಿಸಿ
 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ