ನಾಲ್ಕು ದಶಕಗಳ ಸುದೀರ್ಘ ಹೋರಾಟದ ನಂತರ ಕೃಷ್ಣಾ ನದಿ ನೀರು ಹಂಚಿಕೆಯ ತೀರ್ಪು ಹೊರಬಿದ್ದಿದೆ.ಹಲವು ವಿಷಯಗಳಲ್ಲಿ ತೀರ್ಪು ನಮ್ಮ ಪರವಾಗಿದ್ದರೂ, ಕೆಲವು ಪ್ರಮುಖ ವಿಷಯಗಳಲ್ಲಿ ನಮಗೆ ನ್ಯಾಯ ಸಿಕ್ಕಿಲ್ಲ. ರಾಜ್ಯಕ್ಕೆ ದಕ್ಕಬೇಕಾಗಿದ್ದ ಸುಮಾರು 100 ಟಿ.ಎಂ.ಸಿ ನೀರು ಆಂಧ್ರಪ್ರದೇಶದ ಪಾಲಾಗಿದೆ. ಇದರ ವಿರುದ್ಧ ಧ್ವನಿ ಎತ್ತಬೇಕಾಗಿದ್ದ ನಮ್ಮ ರಾಜ್ಯ ಸರ್ಕಾರ ಹಾಗೂ ಜನಪ್ರತಿನಿಧಿಗಳು, ನಮಗೆ ಸಿಕ್ಕಿರುವುದು ಸಾಕು ಅನ್ನುವ ಧೋರಣೆ ಹೊಂದಿದ್ದಾರೆ. ರಾಜ್ಯ ಸರ್ಕಾರದ ಈ ಧೋರಣೆಯನ್ನು ವಿರೋಧಿಸಿರುವ ನಮ್ಮ ವೇದಿಕೆ, ತುರ್ತಾಗಿ ಆಗಬೇಕಾಗಿರುವ ಕೆಲಸಗಳ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದೆ. 
ಪತ್ರಿಕಾ ವರದಿಯನ್ನು ಇಲ್ಲಿ ನೋಡಿ- http://karave.blogspot.com/2011/01/krishna-nadi-nyayadikarana.html
|