ಲೋಕಾಯುಕ್ತರಾದ ಸಂತೋಷ್ ಹೆಗಡೆಯವರು ಸಲ್ಲಿಸಿರುವ ಅಕ್ರಮ ಗಣಿಗಾರಿಕೆ ಕುರಿತ ವರದಿಯಲ್ಲಿ ಮುಖ್ಯಮಂತ್ರಿಗಳ ಹೆಸರು ಪ್ರಸ್ತಾಪವಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿ ಮುಂದಿನ ತನಿಖೆಗೆ ಸಹಕರಿಸಬೇಕೆಂದು ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆವು. ಇದರ ಬಗ್ಗೆ ಪತ್ರಿಕಾ ವರದಿಯನ್ನು ಇಲ್ಲಿ ನೋಡಿ
ಸಂತೋಷ್ ಹೆಗಡೆ ರವರ ದೂರವಾಣಿ ಕದ್ದಾಲಿಕೆಯ ಬಗ್ಗೆ ತನಿಖೆ ನಡೆಯಲಿ
ಗಣಿ ಹಗರಣದ ಲೋಕಾಯುಕ್ತ ತನಿಖೆಯ ವರದಿಯು ಸರಕಾರಕ್ಕೆ ಸಲ್ಲಿಸುವ ಮೊದಲೇ ಬಿಡುಗಡೆಗೊಂಡಿದೆ. ಇದರ ಬಗ್ಗೆ ಪ್ರತಿಕ್ರಿಯಿಸಿರುವ ಮಾನ್ಯ ಲೋಕಾಯುಕ್ತರಾದ ಸಂತೋಷ್ ಹೆಗಡೆಯವರು ತಮ್ಮ ದೂರವಾಣಿ ಕದ್ದಾಲಿಕೆ ನಡೆದಿರಬಹುದೆಂಬ ಸಂಶಯ ವ್ಯಕ್ತಪಡಿಸಿದ್ದಾರೆ, ಇದರ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ 22 ಜುಲೈ ೨೦೧೧ ರಂದು ಪ್ರತಿಭಟನೆ ನಡೆಸಿದೆವು. ಹೋರಾಟದ ಪತ್ರಿಕಾ ವರದಿಯನ್ನು ಇಲ್ಲಿ ನೋಡಿ
|