Karnataka Rashana Vedike
Kuvempu
Sangatane.jpg
ico_adhyaksharalEkhaniyinda3.jpg
kvrblog.jpg

ಬೆಳಗಾವಿ ಮೇಯರ್-ಉಪಮೇಯರ್ ವರ್ತನೆ ಮತ್ತು ಸರ್ಕಾರದ ಧೋರಣೆ ವಿರುದ್ಧ ತೀವ್ರ ಹೋರಾಟ ಮತ್ತು ಉಪವಾಸ ಸತ್ಯಾಗ್ರಹ

ಕ.ರ.ವೇ ಹೋರಾಟಗಳು

ನಿರಂತರವಾಗಿ ನಾಡವಿರೋಧಿ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿರುವ ಎಂ.ಇ.ಎಸ್. ಅನ್ನು ನಿಗ್ರಹಿಸದೆ, ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಅವರೇ ರಾಜ್ಯೋತ್ಸವದಂದು ಕರಾಳ ದಿನಾಚಾರಣೆ ಆಚರಿಸಿ, ನಾಡ ವಿರೋಧಿ ನಿಲುವನ್ನು ತಳೆದಿರುವುದನ್ನು ಖಂಡಿಸಿ ನಾವು ರಾಜ್ಯಾದ್ಯಂತ ನವೆಂಬರ್ ೩, ೨೦೧೧ ರಂದು ಪ್ರತಿಭಟನೆ ಆರಂಭಿಸಿದ್ದು ನಿಮಗೆ ತಿಳಿದಿದೆ.

ಇದೇ ವಿಷಯವಾಗಿ ಕರ್ನಾಟಕ ಸರ್ಕಾರಕ್ಕೇ ಸವಾಲು ಹಾಕಿರುವ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮಂದಾ ಬಾಳೇಕುಂದ್ರಿ, ಉಪಮೇಯರ್ ರೇಣುಕಿಲ್ಲೇಕರ ಹಾಗೂ ಎಂ.ಇ.ಎಸ್. ಮುಖಂಡ ಸಂಭಾಜಿ ಪಾಟೀಲ - ಈ ಎಲ್ಲಾ ನಾಡದ್ರೋಹಿಗಳನ್ನು ಬಂಧಿಸಿ, ಬೆಳಗಾವಿ ನಗರಪಾಲಿಕೆ ವಿಸರ್ಜಿಸುವಂತೆ ಆಗ್ರಹಿಸಿ ನಿರಂತರ ಹೋರಾಟ ನಡೆಸುಕೊಂಡು ಬರುತ್ತಿದ್ದೇವೆ. ಹೋರಾಟದ ಅಂಗವಾಗಿ ಒಂದು ವಾರಕ್ಕೂ ಹೆಚ್ಚು ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿ ಹೋರಾಟವನ್ನು ತೀವ್ರಗೊಳಿಸಿದ್ದೆವು.
 
ಈ ವಿಷಯವಾಗಿ ನವೆಂಬರ್ ೩, ೨೦೧೧ ರಿಂದ ಇಲ್ಲಿಯವರೆಗೂ ನಡೆಸಿಕೊಂಡು ಬಂದಿರುವ ನಿರಂತರ ಹೋರಾಟಗಳ ಕುರಿತು ಹೆಚ್ಚಿನ ಮಾಹಿತಿ, ಪತ್ರಿಕಾ ವರದಿಗಳನ್ನು ಕೆಳಗಿನ ಕೊಂಡಿಗಳಲ್ಲಿ ನೋಡಿ:
 
ನವೆಂಬರ್ ೩, ೨೦೧೧ ರಂದು ನಾವು ಆರಂಭಿಸಿದ ರಾಜ್ಯವ್ಯಾಪಿ ಪ್ರತಿಭಟನೆಯ ಪತ್ರಿಕಾ ವರದಿಗಳನ್ನು ಕೆಳಗೆ ನೋಡಿ:
 
ನವೆಂಬರ್ ೮, ೨೦೧೧ ರಂದು ಬೆಂಗಳೂರಿನ ಬನ್ನಪ್ಪ ಪಾರ್ಕಿನಿಂದ ವಿಧಾನಸೌಧದವರೆಗೆ ನಾವು ನಡೆಸಿದ ಬೃಹತ್ ಪ್ರತಿಭಟನಾ ನಡಿಗೆಯ ವೇಳೆ ಸರ್ಕಾರಕ್ಕೆ ಸಲ್ಲಿಸಿದ ಮನವಿ ಪತ್ರ ಮತ್ತು ಪತ್ರಿಕಾ ವರದಿಗಳನ್ನು ಕೆಳಗೆ ನೋಡಿ:
 
ಬೆಳಗಾವಿ ಮೇಯರ್-ಉಪಮೇಯರ್ ಸದಸ್ಯತ್ವ ರದ್ದುಗೊಳಿಸದೇ, ನಗರ ಪಾಲಿಕೆಯನ್ನೂ ವಿಸರ್ಜಿಸದೇ ಇರುವ ಸರ್ಕಾರದ ಧೋರಣೆಯನ್ನು ಬದಲಿಸಬೇಕೆಂದು ಆಗ್ರಹಿಸಿ ನವೆಂಬರ್ ೧೯ ರಂದು ಬೆಳಗಾವಿಯಲ್ಲಿ ಆರಂಭಿಸಿದ ಆಮರಣಾಂತ ಉಪವಾಸ ಸತ್ಯಾಗ್ರಹ ಮತ್ತು ಬೆಂಗಳೂರಿನಲ್ಲಿ ನಡೆಸಿದ ಪ್ರತಿಭಟನೆಯ ಪತ್ರಿಕಾ ವರದಿಗಳನ್ನು ಕೆಳಗೆ ನೋಡಿ:
 
ನಮ್ಮ ಹೋರಾಟವನ್ನು ಮುಂದುವರೆಸುತ್ತಾ ನವೆಂಬರ್ ೨೪, ೨೦೧೧ ರಂದು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಅವರ ಗೃಹ ಕಚೇರಿ "ಕೃಷ್ಣಾ" ಮುಂದೆ ನೂರಾರು ಕಾರ್ಯಕರ್ತರೊಡನೆ ರಾಜ್ಯ ಸರ್ಕಾರದ ಧೋರಣೆಯನ್ನು ಪ್ರತಿಭಟಿಸುವ ಮೂಲಕ ಹೋರಾಟದ ತೀವ್ರತೆಯನ್ನು ಹೆಚ್ಚಿಸಿದೆವು. ಅದರ ಪತ್ರಿಕಾ ವರದಿಗಳನ್ನು ಕೆಳಗೆ ನೋಡಿ:
 
ಬೆಳಗಾವಿ ಪ್ರಸಕ್ತ ವಿದ್ಯಮಾನಗಳ ಕುರಿತು ಟಿ.ಎ. ನಾರಾಯಣಗೌಡರು ಕನ್ನಡಪ್ರಭಕ್ಕೆ ನೀಡಿದ ಸಂದರ್ಶನದ ವಿವರವನ್ನು ಕೆಳಗೆ ನೋಡಿ:
 

ಕ.ರ.ವೇ ಹೋರಾಟಗಳು - ವಿಭಾಗದ ಇತರ ಅಂಕಣಗಳು

ನಿಮ್ಮ ಸ್ನೇಹಿತನಿಗೆ ಈ ಅಂಕಣ ಕಳಿಸಿ
 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ