ಇತ್ತೀಚಿಗೆ, ಹುಬ್ಬಳ್ಳಿಯಲ್ಲಿ ತನ್ನ ಕೇಂದ್ರ ಕಛೇರಿ ಹೊಂದಿರುವ, ಬಹುತೇಕ ಕರ್ನಾಟಕವನ್ನು ವ್ಯಾಪಿಸಿರುವ ನೈಋತ್ಯ ವಲಯದಲ್ಲಿ ಡಿ ವರ್ಗದ ೪೭೦೦ ಹುದ್ದೆಗಳು ಖಾಲಿ ಇದ್ದು ಅವುಗಳನ್ನು ಭರ್ತಿಮಾಡಲು ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಈ ಪ್ರಕ್ರಿಯೆಯಲ್ಲಿ ಕನ್ನಡಿಗರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಈ ಅನ್ಯಾಯದ ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಿ ಸರಿಯಾದ ವಿಧಾನದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಮತ್ತೆ ನಡೆಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯು ಕೇಂದ್ರ ಸರ್ಕಾರಕ್ಕೆ, ಸಂಬಂಧಿಸಿದ ಇಲಾಖೆಗೆ ಗೌರವಾನ್ವಿತ ರಾಜ್ಯಪಾಲರಾದ ತಮ್ಮ ಮೂಲಕ ಕನ್ನಡಿಗರ ಹಕ್ಕೊತ್ತಾಯವನ್ನು ಸಲ್ಲಿಸುತ್ತದೆ.
ಸಲ್ಲಿಸಿದ ಹಕ್ಕೊತ್ತಯವನ್ನು ಕೆಳಗಿನ ಕೊಂಡಿಯಲ್ಲಿ ಓದಿರಿ: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಪಾಲರಿಗೆ ಸಲ್ಲಿಸಿದ ಹಕ್ಕೊತಾಯ
|