ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನವನ್ನು ಕೊಡದೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರ, ನಮ್ಮ ಹಣದಲ್ಲಿ ,ಕನ್ನಡ ಮಕ್ಕಳ ಮೇಲೆ ಹಿಂದಿ ಹೇರಿಕೆಯನ್ನು ಮಾಡುತ್ತಿದೆ. ಸೆಪ್ಟಂಬರ್ ತಿಂಗಳಲ್ಲಿ ಹಿಂದಿ ಸಪ್ತಾಹದ ಮೂಲಕ ರಾಜ್ಯದ ಎಲ್ಲಾ ಕೇಂದ್ರ ಸರ್ಕಾರದ ಕಛೇರಿಗಳಲ್ಲಿ ಹಿಂದಿ ಬಳಸಬೇಕೆಂದು ಒತ್ತಾಯ ಮಾಡುತ್ತಿದೆ. ಈ ನಿಟ್ಟಿನಲ್ಲಿ ಕರವೇ ರಾಜ್ಯಾದ್ಯಂತ ಪ್ರತಿಭಟನೆಗಳ ಮೂಲಕ ಕನ್ನಡಿಗರಲ್ಲಿ ಜಾಗೃತಿ ತರಲಿದೆ. ಹಾಗೆಯೇ ಹಿಂದಿ ಸಪ್ತಾಹದ ಕಾರ್ಯಕ್ರಮಗಳನ್ನು ಬಹಿಷ್ಕರಿಸಿ ಕನ್ನಡಿಗರು ಒಗ್ಗಟ್ಟನ್ನು ಪ್ರದರ್ಶನ ಮಾಡಬೇಕೆಂದು ಎಲ್ಲಾ ಕನ್ನಡಿಗರಲ್ಲಿ ಮನವಿ ಮಾಡಿಕೊಳ್ಳುತ್ತಿದೆ.
ಹಿಂದಿ ಹೇರಿಕೆಯ ವಿರುದ್ಧ ನಡೆಸಲಾದ ಪ್ರತಿಭಟನೆಯ ಬಗ್ಗೆ
ಇಲ್ಲಿ ನೋಡಿ